Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:30 - ಕನ್ನಡ ಸಮಕಾಲಿಕ ಅನುವಾದ

30 ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಲ್ಲಿ ತಮ್ಮ ವಿಷಯವಾಗಿ ದೇವರ ಸಂಕಲ್ಪವನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ದೇವರ ಯೋಜನೆಯನ್ನು ತಿರಸ್ಕರಿಸಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಖರೆ ಫಾರಿಜೆವಾನಿ, ಅನಿ ಖಾಯ್ದೆ ಶಿಕ್ವುತಲ್ಯಾನಿ, ಅಪ್ನಾಸಾಟ್ನಿಚ್ ಮನುನ್ ಹೊತ್ತ್ಯಾ ದೆವಾಚ್ಯಾ ಯವ್ಜನ್ಯಾಕ್ನಿ, ತೆನಿ ಮರ್ಯಾದ್‍ ದಿವ್ಕನ್ಯಾತ್, ಅನಿ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ನಕ್ಕೊ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:30
11 ತಿಳಿವುಗಳ ಹೋಲಿಕೆ  

“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.


ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.


ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ


ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?


‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು