Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:7 - ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದ ನಾನು ನನ್ನನ್ನು ನಿನ್ನ ಬಳಿಗೆ ಬರುವದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀನು ಒಂದು ಮಾತು ಹೇಳು, ನನ್ನ ಆಳಿಗೆ ಗುಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಮಾಕಾ,ತುಜ್ಯಾ ಇದ್ರಾಕ್ ಯೆಯ್ ಸಾರ್ಕಿ ಕಿಮ್ಮತ್‍ಬಿ ನಾ, ತಿಯಾ ಥೈತ್ನಾಚ್ ಎಕ್ ಗೊಸ್ಟ್ ಸಾಂಗ್ಲ್ಯಾರ್ ಫಿರೆ, ತೊ ಆರಾಮ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:7
10 ತಿಳಿವುಗಳ ಹೋಲಿಕೆ  

ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.


ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.


ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.


ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು