Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ತಮ್ಮ ಒಳ್ಳೆಯ ಹೃದಯದಲ್ಲಿ ಅದನ್ನು ಸಂಗ್ರಹಿಸಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ. ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:15
40 ತಿಳಿವುಗಳ ಹೋಲಿಕೆ  

ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:


ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.


“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.


ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.


ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.


ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.


ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು