Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:21 - ಕನ್ನಡ ಸಮಕಾಲಿಕ ಅನುವಾದ

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಅವರಿಗೆ - ಯಾರು ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುತ್ತಾರೋ ಅವರೇ ನನಗೆ ತಾಯಿಯೂ ಸಹೋದರರು ಆಗಬೇಕು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದಕ್ಕೆ ವಿಧೇಯರಾಗುವ ಜನರೇ ನನ್ನ ತಾಯಿ ಮತ್ತು ನನ್ನ ತಮ್ಮಂದಿರು!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಜೆಜುನ್ ತೆಂಕಾ ಸಗ್ಳ್ಯಾಕ್ನಿ “ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ತಸೆಚ್ ಚಲ್ತ್ಯಾತ್, ತೆನಿ ಮಾಜಿ ಬಾಯ್, ಅನಿ ಮಾಜಿ ಭಾವಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:21
19 ತಿಳಿವುಗಳ ಹೋಲಿಕೆ  

ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.


ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.


ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.


“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.


ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು