Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:30 - ಕನ್ನಡ ಸಮಕಾಲಿಕ ಅನುವಾದ

30 ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೇಸುವು ಅವನಿಗೆ, “ನಿನ್ನ ಹೆಸರೇನೆಂದು?” ಕೇಳಲು ಅವನು, “ನನ್ನ ಹೆಸರು ದಂಡು” ಅಂದನು, ಏಕೆಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ", ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯೇಸು - ನಿನ್ನ ಹೆಸರೇನೆಂದು ಅವನನ್ನು ಕೇಳಿದ್ದಕ್ಕೆ ಅವನು - ನನ್ನ ಹೆಸರು ದಂಡು ಅಂದನು; ಯಾಕಂದರೆ ಬಹಳ ದೆವ್ವಗಳು ಅವನೊಳಗೆ ಹೊಕ್ಕಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಿನ್ನ ಹೆಸರೇನು?” ಎಂದು ಯೇಸು ಕೇಳಿದನು. “ದಂಡು” ಎಂದು ಅವನು ಉತ್ತರಿಸಿದನು. (ಏಕೆಂದರೆ ಅವನೊಳಗೆ ಅನೇಕ ದೆವ್ವಗಳು ಸೇರಿಕೊಂಡಿದ್ದವು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೆಜುನ್ ತೆಕಾ “ತುಜೆ ನಾವ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಮಾಜೆ ನಾವ್ ಸೈತಾನಾಂಚೊ ತಾಂಡೊ” ಮಟ್ಲ್ಯಾನ್ ತೆಚ್ಯಾ ಆಂಗಾತ್ ಲೈ ಗಿರೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:30
7 ತಿಳಿವುಗಳ ಹೋಲಿಕೆ  

ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?


ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,


ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.


ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.


ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು