32 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,
32 ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.
32 ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು.
ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.
ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.
ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.
ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.
“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.
“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.