Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:42 - ಕನ್ನಡ ಸಮಕಾಲಿಕ ಅನುವಾದ

42 ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಅವನಿಗೆ ಒಬ್ಬಳೇ ಮಗಳಿದ್ದಳು. ಆಕೆಗೆ ಹನೆರಡು ವರ್ಷ ವಯಸ್ಸಾಗಿತ್ತು. ಆಕೆಯು ಸಾಯುವ ಸ್ಥಿತಿಯಲ್ಲಿದ್ದಳು. ಯೇಸುವು ಯಾಯಿರನ ಮನೆಗೆ ಹೋಗುತ್ತಿದ್ದಾಗ ಜನರು ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಕಶ್ಯಾಕ್ ಮಟ್ಲ್ಯಾರ್, ತೆಚಿ ಬಾರಾ ವರ್ಸಾಚಿ ಲೆಕ್ ಮರ್‍ತಲ್ಯಾ ಸ್ಧಿತಿರ್ ಹೊತ್ತಿ, ತನ್ನಾ ಜೆಜು ತೆಚ್ಯಾ ವಾಂಗ್ಡಾ ಜಾವ್ನಗೆತ್ ಹೊತ್ತೊ, ತನ್ನಾ ಲೊಕಾ ಜೆಜುಚ್ಯಾ ಭೊತ್ಯಾನಿ ಹೊತ್ತಿ, ಅನಿ ಢಕ್ಲಾ-ಢಕ್ಲಿ ಕರಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:42
15 ತಿಳಿವುಗಳ ಹೋಲಿಕೆ  

ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.


ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.


ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.


ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.


“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,


“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.


“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.


ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು