Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್ ಅನಿ ಗಿರೆ ಕಾಡ್ತಲೊ ಅದಿಕಾರ್ ಅನಿ ಬಳ್ ತೆಂಕಾ ದಿಲ್ಯಾನ್, ಅನಿ ರೊಗಾ ಗುನ್ ಕರ್‍ತಲೊಬಿ ಬಳ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:1
15 ತಿಳಿವುಗಳ ಹೋಲಿಕೆ  

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.


ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.


ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.


ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.


ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು