Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:22 - ಕನ್ನಡ ಸಮಕಾಲಿಕ ಅನುವಾದ

22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ತೆನಿ “ಮಾನ್ಸಾಚ್ಯಾ ಲೆಕಾನ್ ಕಸ್ಟ್ ಸೊಸುಕ್ ಪಾಜೆ, ಅನಿ ಜಾನ್ತ್ಯಾಂಚ್ಯಾ, ಮುಖ್ಯ ಯಾಜಕಾಂಚ್ಯಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮರ್‍ಯಾದ್ ಕಾಡುನ್ ಘೆವ್ಕ್ ಪಾಜೆ. ತೆಕಾ ಜಿವಾನಿ ಮಾರ್‍ತ್ಯಾತ್. ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ, ತೊ ಝಿತ್ತೊ ಹೊವ್ನ್ ಉಟುನ್ ಯೆತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:22
24 ತಿಳಿವುಗಳ ಹೋಲಿಕೆ  

‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.


“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.


ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.


ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,


ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು