Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:5 - ಕನ್ನಡ ಸಮಕಾಲಿಕ ಅನುವಾದ

5 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖೈ ತರ್ ತುಮ್ಕಾ ಸ್ವಾಗತ್ ಕರಿನಸ್ಲ್ಯಾರ್, ತೆ ಶಾರ್ ಸೊಡುನ್ ಚಲಾ. ಜಾತಾನಾ ತುಮ್ಚ್ಯಾ ತಳ್‍ಪಾಯಾಚಿ ಮಾಟಿ ಫಾಪ್ಡಾ, ಹೆ ತೆಂಕಾ ಎಕ್ ಸಾಕ್ಷಿ ಹೊಂವ್ದಿ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:5
13 ತಿಳಿವುಗಳ ಹೋಲಿಕೆ  

ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.


ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.


ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.


“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.


ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು