Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:10 - ಕನ್ನಡ ಸಮಕಾಲಿಕ ಅನುವಾದ

10 ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ದೇಶವನ್ನು ಬಿಟ್ಟುಹೋದಾರು. ಅವರು ವೃದ್ಧಿಯಾಗದಂತೆ ನಾವು ಉಪಾಯ ಮಾಡೋಣ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:10
13 ತಿಳಿವುಗಳ ಹೋಲಿಕೆ  

ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.


ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;


ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.


ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.


ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು