Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 1:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಅವನ ಜನರು ಇಸ್ರಾಯೇಲ್ಯರನ್ನು ಬಿಟ್ಟೀಕೆಲಸದಿಂದ ಉಪದ್ರವಪಡಿಸುವದಕ್ಕಾಗಿ ಬಿಟ್ಟೀಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇಟ್ಟು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 1:11
21 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.


ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.


ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.


ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”


ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.


ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.


ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?


ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.


ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.


“ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.


ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.


“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು