Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:13 - ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೋಶೆ ತನ್ನ ಕೋಲನ್ನು ಐಗುಪ್ತ ದೇಶದ ಮೇಲೆ ಚಾಚಿದಾಗ, ಯೆಹೋವನು ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸುವಂತೆ ಮಾಡಿದನು. ಹೊತ್ತಾರೆ ಗಾಳಿಯ ದೆಸೆಯಿಂದ ಮಿಡತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೋಶೆ ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಯೆಹೋವನು ಆ ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸಮಾಡಿದನು. ಹೊತ್ತಾರೆ ಆ ಗಾಳಿಯ ದೆಸೆಯಿಂದ ವಿುಡಿತೆಗಳು ಬಂದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:13
11 ತಿಳಿವುಗಳ ಹೋಲಿಕೆ  

ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.


ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,


ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.


ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.


ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.


ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.


ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.


ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು