Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:23 - ಕನ್ನಡ ಸಮಕಾಲಿಕ ಅನುವಾದ

23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಿಲ್ಲ. ಯಾರೂ ತಮ್ಮ ಸ್ಥಳದಿಂದ ಏಳಲೂ ಇಲ್ಲ. ಆದರೆ ಇಸ್ರಾಯೇಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೂರು ದಿವಸವೂ ಒಬ್ಬರಿಗೊಬ್ಬರು ಕಾಣಿಸಲಿಲ್ಲ; ಯಾವನೂ ತಾನಿರುವ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಾಯೇಲ್ಯರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಈ ಮೂರು ದಿನಗಳಲ್ಲಿ ಯಾರೂ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾವ ಸ್ಥಳಕ್ಕೂ ಹೋಗಲಿಲ್ಲ. ಆದರೆ ಇಸ್ರೇಲರು ವಾಸಿಸುತ್ತಿದ್ದ ಸ್ಥಳಗಳಲ್ಲಿ ಬೆಳಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:23
15 ತಿಳಿವುಗಳ ಹೋಲಿಕೆ  

“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.


ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.


ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ಯೆಹೋವ ದೇವರು ನೈಲ್ ನದಿಯನ್ನು ರಕ್ತವನ್ನಾಗಿ ಮಾಡಿ ಏಳು ದಿನಗಳು ಕಳೆದವು.


ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.


ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು