Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:5 - ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:5
7 ತಿಳಿವುಗಳ ಹೋಲಿಕೆ  

ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.


“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.


ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.


ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.


ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.


ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು