Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:7 - ಕನ್ನಡ ಸಮಕಾಲಿಕ ಅನುವಾದ

7 ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಫರೋಹನ ಪರಿವಾರದವರು ಅವನಿಗೆ, “ಈ ಮನುಷ್ಯನು ಇನ್ನು ಎಷ್ಟು ದಿನ ನಮಗೆ ಉರುಲಾಗಿರಬೇಕು. ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವುದಕ್ಕೆ ಅಪ್ಪಣೆಕೊಡು. ಐಗುಪ್ತ ದೇಶವು ಹಾಳಾಯಿತೆಂದು ಇನ್ನು ನಿನ್ನ ಮನಸ್ಸಿಗೆ ಬರಲಿಲ್ಲವೋ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಫರೋಹನ ಪರಿವಾರದವರು ಅವನಿಗೆ - ಈ ಮನುಷ್ಯನು ಇನ್ನು ಎಷ್ಟು ದಿವಸ ನಮಗೆ ಉರುಲಾಗಿರಬೇಕು? ಆ ಜನರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸುವದಕ್ಕೆ ಅಪ್ಪಣೆಕೊಡು. ಐಗುಪ್ತದೇಶವು ಹಾಳಾಯಿತೆಂದು ಇನ್ನೂ ನಿನ್ನ ಮನಸ್ಸಿಗೆ ಬರಲಿಲ್ಲವೋ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:7
16 ತಿಳಿವುಗಳ ಹೋಲಿಕೆ  

“ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.


ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.


ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”


ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ.


ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.


ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.


ಮೋವಾಬು ನಾಶವಾಯಿತು: ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.


ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.


ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು