Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:15 - ಕನ್ನಡ ಸಮಕಾಲಿಕ ಅನುವಾದ

15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:15
28 ತಿಳಿವುಗಳ ಹೋಲಿಕೆ  

ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.


ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.


ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.


ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!


ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.


ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.


ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.


ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.


ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.


ಅವರು ಆ ಹಬ್ಬವನ್ನು ಮುಗಿಸಿಕೊಂಡು ಹಿಂದಿರುಗಿ ಬರುವಾಗ ಬಾಲಕ ಯೇಸು ಯೆರೂಸಲೇಮಿನಲ್ಲಿಯೇ ಉಳಿದದ್ದು, ತಂದೆತಾಯಿಗಳಿಗೆ ತಿಳಿದಿರಲಿಲ್ಲ.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು