Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:17 - ಕನ್ನಡ ಸಮಕಾಲಿಕ ಅನುವಾದ

17 “ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:17
12 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.


ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


“ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು.


ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು