Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:29 - ಕನ್ನಡ ಸಮಕಾಲಿಕ ಅನುವಾದ

29 ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:29
27 ತಿಳಿವುಗಳ ಹೋಲಿಕೆ  

ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು.


ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.


ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.


“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.


ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.


ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.


ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.


ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.


ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.


ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.


ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”


ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”


ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.


ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು.


ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.


ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು.


“ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು