Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:11 - ಕನ್ನಡ ಸಮಕಾಲಿಕ ಅನುವಾದ

11 “ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನು ತಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಪ್ರಮಾಣವಚನದ ಮೇರೆಗೆ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಯೆಹೋವನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವನು. ಈಗ ಅಲ್ಲಿ ಕಾನಾನ್ಯರು ವಾಸವಾಗಿದ್ದಾರೆ. ಆದರೆ ದೇವರು ಆ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದನು. ದೇವರು ಆ ದೇಶವನ್ನು ನಿಮಗೆ ಕೊಟ್ಟನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:11
7 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.


ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.


ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.


ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?


ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು