Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:3
58 ತಿಳಿವುಗಳ ಹೋಲಿಕೆ  

ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.


ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.


“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.


ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.


ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.


ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.


ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.


ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.


ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.


ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.


ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.


ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.


ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.


ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.


ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.


“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.


ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.


“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ,


ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


“ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರಬೇಕು.


ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.


ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು


ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.


ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,


ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.


ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.


“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.


ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.


ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು