Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:12 - ಕನ್ನಡ ಸಮಕಾಲಿಕ ಅನುವಾದ

12 ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಐಗುಪ್ತ ದೇಶದಲ್ಲಿರುವಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ. ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು’ ಎಂಬುದಾಗಿ ನಿನಗೆ ಹೇಳಲಿಲ್ಲವೇ. ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವುದೇ ಮೇಲಲ್ಲವೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಐಗುಪ್ತದೇಶದಲ್ಲಿದ್ದಾಗಲೇ - ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ದಾಸರಾಗಿಯೇ ಇರುವೆವು ಎಂಬದಾಗಿ ನಿನಗೆ ಹೇಳಲಿಲ್ಲವೇ? ನಾವು ಅರಣ್ಯದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ದಾಸರಾಗಿರುವದೇ ವಾಸಿಯಲ್ಲವೇ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ನಿನಗೆ ಈಜಿಪ್ಟಿನಲ್ಲೇ, ‘ದಯಮಾಡಿ ನಮ್ಮ ಗೊಡವೆಗೆ ಬರಬೇಡ. ನಾವು ಇಲ್ಲಿದ್ದುಕೊಂಡು ಈಜಿಪ್ಟಿನವರ ಸೇವೆಮಾಡಲು ಬಿಡು’ ಎಂದು ಹೇಳಿದ್ದೆವು. ನಾವು ಇಲ್ಲಿಗೆ ಬಂದು ಅರಣ್ಯದಲ್ಲಿ ಸಾಯುವುದಕ್ಕಿಂತ, ಅಲ್ಲೇ ಗುಲಾಮರಾಗಿ ಇದ್ದಿದ್ದರೆ ಒಳ್ಳೆಯದಾಗಿರುತ್ತಿತ್ತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:12
11 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.


ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು.


ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.


ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು