Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:17 - ಕನ್ನಡ ಸಮಕಾಲಿಕ ಅನುವಾದ

17 ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:17
26 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.


“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?


ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು.


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.


“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ


ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ಈಜಿಪ್ಟಿನವರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆ ಸವಾರರೂ ಅವರನ್ನು ಹಿಂದಟ್ಟಿ, ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?


ರಥಗಳೂ, ರಾಹುತರೂ ಅವನ ಸಂಗಡ ಹೊರಟು ಹೋದರು. ಸಮೂಹವು ಬಹಳ ದೊಡ್ಡದಾಗಿತ್ತು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.


ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು