Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ, ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:21
30 ತಿಳಿವುಗಳ ಹೋಲಿಕೆ  

ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ.


ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.


ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.


ಆದರೆ ತೆರೆಗಳು ಬೋರ್ಗರೆಯುವಾಗ, ಸಮುದ್ರವನ್ನು ವಿಭಾಗಿಸಿದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ, ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.


ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.


ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.


ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.


ಯೆಹೋವ ದೇವರು ಇಂತೆನ್ನುತ್ತಾರೆ: ಸಮುದ್ರದ ಮುಖಾಂತರವಾಗಿ ಮಾರ್ಗಮಾಡಿದವನೂ; ಬಲವಾದ ನೀರಿನಲ್ಲಿ ದಾರಿ ಮಾಡಿದವನೂ;


ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.


ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡೆಸಿದವನು ಎಲ್ಲಿ?”


ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?


ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?


ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,


ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು