Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:29 - ಕನ್ನಡ ಸಮಕಾಲಿಕ ಅನುವಾದ

29 ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಇಸ್ರೇಲರು ಒಣನೆಲದಲ್ಲಿ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:29
19 ತಿಳಿವುಗಳ ಹೋಲಿಕೆ  

ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.


ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?


ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.


ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.


ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.


ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.


ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.


ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.


ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು