Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:31 - ಕನ್ನಡ ಸಮಕಾಲಿಕ ಅನುವಾದ

31 ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:31
18 ತಿಳಿವುಗಳ ಹೋಲಿಕೆ  

ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.


ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.


ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.


ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.


ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.


“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


“ಈಗ ನಿಂತುಕೊಂಡು ಯೆಹೋವ ದೇವರು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ಮಹತ್ಕಾರ್ಯವನ್ನು ನೋಡಿರಿ.


“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.


ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.


ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು