Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:8 - ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:8
21 ತಿಳಿವುಗಳ ಹೋಲಿಕೆ  

ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;


ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.


ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,


ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.


ಇದು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯ ಮೇಲೆ ಸಂಕೇತವಾಗಿಯೂ ಇರಲಿ. ಏಕೆಂದರೆ ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ ಎಂದು ಹೇಳಬೇಕು,” ಎಂದರು.


ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.


ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”


ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.


ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.


ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು.


ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು.


ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.


ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.


ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.


ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು