Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:15
24 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.


ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.


“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.


ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.


ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,


ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.


ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.


‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.


ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.


ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.


ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.


ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.


ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.


ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.


ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,


ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು.


ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.


ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.


ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು