Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:21 - ಕನ್ನಡ ಸಮಕಾಲಿಕ ಅನುವಾದ

21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ವಿುರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು- ಯೆಹೋವನನ್ನು ಗಾನಮಾಡಿರಿ; ಆತನು ಮಹಾಜಯಶಾಲಿಯಾದನು; ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ಕೆಡವಿ ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; ಆತನು ಮಹಾಜಯಶಾಲಿಯಾದನು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:21
17 ತಿಳಿವುಗಳ ಹೋಲಿಕೆ  

ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.


“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.


“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.


ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು