Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:27 - ಕನ್ನಡ ಸಮಕಾಲಿಕ ಅನುವಾದ

27 ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ನಂತರ ಅವರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬುಗ್ಗೆಗಳೂ, ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆ ನೀರಿನ ಬಳಿಯಲ್ಲಿ ಅವರು ಇಳಿದು ಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಲ್ಲಿಂದ ಆ ಜನರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆದ್ದರಿಂದ ಆ ನೀರಿನ ಬಳಿಯಲ್ಲೇ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:27
7 ತಿಳಿವುಗಳ ಹೋಲಿಕೆ  

ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.


ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”


ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.


ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.


ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು