Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:5 - ಕನ್ನಡ ಸಮಕಾಲಿಕ ಅನುವಾದ

5 ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾಗರವು ಅವರನ್ನು ಮುಚ್ಚಿಬಿಟ್ಟಿತು; ಕಲ್ಲಿನಂತೆ ಧಡಲ್ಲೆಂದು ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:5
12 ತಿಳಿವುಗಳ ಹೋಲಿಕೆ  

ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ


ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.


ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.


ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು.


ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.


“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.


ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.


ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.


ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.


ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.


ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು