Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಗ ಯೆಹೋವನು ಮೋಶೆಗೆ, “ನೀವು ಎಲ್ಲಿಯವರೆಗೆ ನನ್ನ ಆಜ್ಞೆಗಳನ್ನೂ, ನಾನು ಮಾಡಿರುವ ನಿಯಮಗಳನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:28
19 ತಿಳಿವುಗಳ ಹೋಲಿಕೆ  

ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.


ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.


“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.


ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.


ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.


ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.


ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವುದಕ್ಕೆ ಹೊರಗೆ ಹೋದಾಗ, ಅವರಿಗೆ ಏನೂ ಸಿಕ್ಕಲಿಲ್ಲ.


ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.


ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು