Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:35 - ಕನ್ನಡ ಸಮಕಾಲಿಕ ಅನುವಾದ

35 ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:35
16 ತಿಳಿವುಗಳ ಹೋಲಿಕೆ  

ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು.


ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.


ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.


ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.


ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.


ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.


ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು