Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:6 - ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನಗೆದುರಾಗಿ ನಿಂತುಕೊಳ್ಳುವೆನು. ನೀನು ಆ ಬಂಡೆಯನ್ನು ಹೊಡೆದಾಗ, ಜನರು ಕುಡಿಯುವಂತೆ ನೀರು ಹೊರಗೆ ಬರುವುದು” ಎಂದನು. ಮೋಶೆ ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಹೋರೇಬಿನಲ್ಲಿರುವ ಬಂಡೆಯ ಮೇಲೆ ನಾನೇ ನಿನ್ನೆದುರಾಗಿ ನಿಲ್ಲುವೆನು. ನೀನು ಆ ಬಂಡೆಯನ್ನು ಹೊಡೆದಾಗ ಅದರಿಂದ ನೀರು ಹೊರಡುವದು, ಜನರು ಕುಡಿಯುವರು ಎಂದು ಮೋಶೆಗೆ ಅಪ್ಪಣೆ ಕೊಡಲಾಗಿ ಮೋಶೆ ಇಸ್ರಾಯೇಲ್ಯರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೋರೇಬಿನಲ್ಲಿ ನಾನು ನಿನ್ನ ಮುಂದೆ ಒಂದು ಬಂಡೆಯ ಮೇಲೆ ನಿಲ್ಲುವೆನು. ಊರುಗೋಲಿನಿಂದ ಆ ಬಂಡೆಯನ್ನು ಹೊಡೆ; ಆಗ ನೀರು ಅದರೊಳಗಿಂದ ಬರುವುದು. ಆಗ ಜನರು ಕುಡಿಯಬಹುದು” ಎಂದು ಹೇಳಿದನು. ಅಂತೆಯೇ ಮೋಶೆ ಮಾಡಿದನು. ಇಸ್ರೇಲರ ಹಿರಿಯರು ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:6
24 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.


ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.


ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.


“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.


ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.


ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.


ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು