Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:7 - ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:7
21 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.


“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.


ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.


ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.


ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


“ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”


ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.


ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.


ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.


ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.


ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.


ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು