Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:10 - ಕನ್ನಡ ಸಮಕಾಲಿಕ ಅನುವಾದ

10 ಇತ್ರೋವನು, “ಈಜಿಪ್ಟಿನವರ ಕೈಗೂ ಫರೋಹನ ಕೈಗೂ ಈಜಿಪ್ಟಿನವರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ರೋವನು, “ಐಗುಪ್ತ್ಯರ ಕೈಯಿಂದಲೂ, ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಐಗುಪ್ತ್ಯರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇತ್ರೋನನು, “ಯೆಹೋವನನ್ನು ಸ್ತುತಿಸಿರಿ! ಆತನು ನಿಮ್ಮನ್ನು ಫರೋಹನಿಂದಲೂ ಈಜಿಪ್ಟಿನಿಂದಲೂ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:10
16 ತಿಳಿವುಗಳ ಹೋಲಿಕೆ  

ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.


ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.


“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು?


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.


ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


“ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು