Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:22 - ಕನ್ನಡ ಸಮಕಾಲಿಕ ಅನುವಾದ

22 ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ; ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವದರಿಂದ ನಿನಗೆ ಸುಲಭವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:22
12 ತಿಳಿವುಗಳ ಹೋಲಿಕೆ  

ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,


ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,


ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,


ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.


ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.


ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.


ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ.


ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.


“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು