Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:7 - ಕನ್ನಡ ಸಮಕಾಲಿಕ ಅನುವಾದ

7 ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:7
23 ತಿಳಿವುಗಳ ಹೋಲಿಕೆ  

ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.


ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.


ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,


ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.


ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.


ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.


ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.


ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.


ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.


ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.


ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.


ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.


ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.


ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.


ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.


ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.


ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.


ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು