Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:10
24 ತಿಳಿವುಗಳ ಹೋಲಿಕೆ  

ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.


ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.


ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.


ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.


ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.


“ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.


ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.


ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.


ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು