Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:11 - ಕನ್ನಡ ಸಮಕಾಲಿಕ ಅನುವಾದ

11 ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:11
20 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.


ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.


ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.


ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.


ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.


ಬೆಳಿಗ್ಗೆ ನೀನು ಸಿದ್ಧನಾಗಿ ಸೀನಾಯಿ ಬೆಟ್ಟವನ್ನೇರಿ, ಆ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.


“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.


ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು.


ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು.


ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು