Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:12 - ಕನ್ನಡ ಸಮಕಾಲಿಕ ಅನುವಾದ

12 ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:12
11 ತಿಳಿವುಗಳ ಹೋಲಿಕೆ  

ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.


ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.


ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.


ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.


ಮೋಶೆಯು ಯೆಹೋವ ದೇವರಿಗೆ, “ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀವೇ ನಮ್ಮನ್ನು ಎಚ್ಚರಿಸಿದ್ದೀರಿ,” ಎಂದನು.


ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.


ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು.


ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ


ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.


ಮೋಶೆ ಒಬ್ಬನೇ ಯೆಹೋವ ದೇವರ ಸಮೀಪಕ್ಕೆ ಬರಲಿ. ಬೇರೆ ಯಾರೂ ಸಮೀಪಕ್ಕೆ ಬರಬಾರದು. ಜನರೂ ಅವನ ಸಂಗಡ ಮೇಲೇರಿ ಬರಬಾರದು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು