Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:13 - ಕನ್ನಡ ಸಮಕಾಲಿಕ ಅನುವಾದ

13 ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:13
11 ತಿಳಿವುಗಳ ಹೋಲಿಕೆ  

ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,” ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು.


ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.


ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು.


ಆಗ ಮೋಶೆಯು ದೇವರನ್ನು ಸಂಧಿಸುವುದಕ್ಕೆ ಜನರನ್ನು ಪಾಳೆಯದೊಳಗಿಂದ ಹೊರಗೆ ಬರಮಾಡಿದನು. ಆಗ ಅವರು ಬೆಟ್ಟದ ಕೆಳಗೆ ನಿಂತುಕೊಂಡರು.


ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.


ಆಗ ಹೊಂಚು ಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಸಾಲಾಗಿ ಹೊರಟು, ಪಟ್ಟಣದಲ್ಲಿರುವವರೆಲ್ಲರನ್ನು ಖಡ್ಗದಿಂದ ಸಂಹರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು