Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:5 - ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:5
54 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.


ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.


ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.


“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.


ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.


ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.


ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.


ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.


ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಂಡರು.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು.


ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.


ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,


ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.


ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ.


ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.


ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.


ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.


ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.


“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.


ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.


ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.


“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.


ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.


ಅದು ಅನೇಕ ಸಾರಿ ಕರುಣೆಗಾಗಿ ನಿನಗೆ ವಿಜ್ಞಾಪನೆಮಾಡಿತೇ? ನಿನ್ನ ಸಂಗಡ ನಮ್ರತೆಯಿಂದ ಮಾತನಾಡೀತೇ?


ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು