Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:3 - ಕನ್ನಡ ಸಮಕಾಲಿಕ ಅನುವಾದ

3 ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆ ಅದನ್ನು ಇನ್ನು ಹೆಚ್ಚುಕಾಲ ಮರೆಮಾಡಲಾಗದೆ, ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆ ಅದನ್ನು ಇನ್ನು ಹೆಚ್ಚು ಕಾಲ ಮರೆಮಾಡಲಾರದೆ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಮಲಗಿಸಿ ನೈಲ್ ನದಿಯ ಅಂಚಿನಲ್ಲಿರುವ ಜಂಬುಹುಲ್ಲಿನಲ್ಲಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:3
10 ತಿಳಿವುಗಳ ಹೋಲಿಕೆ  

ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.


ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.


ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.


ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.


ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.


ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.


ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.


ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು