Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:14 - ಕನ್ನಡ ಸಮಕಾಲಿಕ ಅನುವಾದ

14 ವ್ಯಭಿಚಾರ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ವ್ಯಭಿಚಾರಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವ್ಯಭಿಚಾರಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವ್ಯಭಿಚಾರ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ವ್ಯಭಿಚಾರ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:14
24 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.


“ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ, “ವ್ಯಭಿಚಾರ ಮಾಡಬಾರದು,” ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,” ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ.


ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು