Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:5 - ಕನ್ನಡ ಸಮಕಾಲಿಕ ಅನುವಾದ

5 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:5
65 ತಿಳಿವುಗಳ ಹೋಲಿಕೆ  

ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?


ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.


ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.


ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.


ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.


ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.


ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.


ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.


ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.


ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ


“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.


“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು.


ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ.


ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.


ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.


ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.


“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.


ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.


ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.


“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


“ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.


ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.


ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.


ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.


ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.


ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.


ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.


ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.


ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.


ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.


ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”


“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.


“ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.


ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.


ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.


“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,


“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’


ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು