Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:8 - ಕನ್ನಡ ಸಮಕಾಲಿಕ ಅನುವಾದ

8 ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:8
22 ತಿಳಿವುಗಳ ಹೋಲಿಕೆ  

“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.


“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.


“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.


ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.


ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.


ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”


ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.


ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,


ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.


ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.


“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,


ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.


ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು