Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ದೇವರ ಸಂಕಲ್ಪದಿಂದ ಆ ಕೊಲೆ ನಡೆದಿದೆಯಾದರೆ, ಆ ಕೊಲೆಮಾಡಿದವನು ಓಡಿಹೋಗುವಂತೆ ಅವನಿಗೆ ನಾನು ಒಂದು ಸ್ಥಳವನ್ನು ನೇಮಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:13
13 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ಯೆಹೋವ ದೇವರು ಯೆಹೋಶುವನಿಗೆ,


“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.


ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು