Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:14 - ಕನ್ನಡ ಸಮಕಾಲಿಕ ಅನುವಾದ

14 ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:14
18 ತಿಳಿವುಗಳ ಹೋಲಿಕೆ  

ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.


ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.


ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.


“ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.


“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.


ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು