Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:2 - ಕನ್ನಡ ಸಮಕಾಲಿಕ ಅನುವಾದ

2 “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:2
18 ತಿಳಿವುಗಳ ಹೋಲಿಕೆ  

ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.


ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ


ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.


ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.


ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.


ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.


“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.


“ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು